Top News

ಮುರಿದ ಕಾಲಿಗೆ ರಟ್ಟು ಕಟ್ಟಿದ ಬಿಹಾರದ ಸರ್ಕಾರಿ ಆಸ್ಪತ್ರೆ; ‘ವಾಹ್ ಎಂಥಾ ಪ್ರಯೋಗ’ ಎಂದು ನೆಟ್ಟಿಗರು ಲೇವಡಿ..Bihar

ಮುರಿದ ಕಾಲಿಗೆ ರಟ್ಟು ಕಟ್ಟಿದ ಬಿಹಾರದ ಸರ್ಕಾರಿ ಆಸ್ಪತ್ರೆ; ‘ವಾಹ್ ಎಂಥಾ ಪ್ರಯೋಗ’ ಎಂದು ನೆಟ್ಟಿಗರು ಲೇವಡಿ..Bihar ಸದ್ಯ ಈ ಘಟನೆಯು ಇಲ್ಲಿನ ಆರೋಗ್ಯ ವ್ಯವಸ್ಥೆ ಬಗ್ಗೆ ಗಂಭೀರ ಚರ್ಚೆಯನ್ನು ಹುಟ್ಟುಹಾಕಿದೆ.ಮಂಝೌಲ್ ಉಪ ವಿಭಾಗೀಯ ಆಸ್ಪತ್ರೆಯಿಂದ ಗಾಯಗೊಂಡ ರೋಗಿಯ ಕಾಲಿಗೆ ಬೇರೆಡೆಗೆ ಕಳುಹಿಸುವ ಮೊದಲು ಕಾರ್ಡ್‌ಬೋರ್ಡ್ ತುಂಡುಗಳ ಮೂಲಕ ಬೆಂಬಲ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಟ್ಟು ಕಟ್ಟಿದ ಸಿಬ್ಬಂದಿಆಗಸ್ಟ್​ 3ರ ಸಂಜೆ ಈ ಘಟನೆ ನಡೆದಿದ್ದು, ಹರ್ಸೇನ್​ ಸೇತುವೆ ಬಳಿ ನಡೆದ ಅಪಘಾತದಿಂದಾಗಿ…

Read More

ಟ್ರಂಪ್ ಆಡಳಿತದ ಕಠಿಣ ವಲಸೆ ನೀತಿಗಳ ಪರಿಣಾಮ; ಅಮೆರಿಕ ವಿದ್ಯಾರ್ಥಿ ವೀಸಾಗಳಲ್ಲಿ ಭಾರತೀಯರಿಗೆ ಭಾರಿ ಇಳಿಕೆ

ವಾಷಿಂಗ್ಟನ್/ನವದೆಹಲಿ-ಅಮೆರಿಕದಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ 2025ರ ಮಧ್ಯಭಾಗವು ಸವಾಲಿನ ಅವಧಿಯಾಗಿ ಪರಿಣಮಿಸಿದೆ. ಹೊಸ ವೀಸಾ ಪರಿಶೀಲನಾ ಕ್ರಮಗಳು, ವಲಸೆ ನೀತಿಗಳ ಕಠಿಣತೆ ಮತ್ತು ಅಧ್ಯಯನದ ನಂತರದ ಉದ್ಯೋಗ ಅವಕಾಶಗಳ ಬಗ್ಗೆ ಉಂಟಾಗಿರುವ ಅನಿಶ್ಚಿತತೆಯ ನಡುವೆ ಭಾರತೀಯ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಅಮೆರಿಕದ F-1 ವಿದ್ಯಾರ್ಥಿ ವೀಸಾಗಳ ಸಂಖ್ಯೆಯಲ್ಲಿ ಗಮನಾರ್ಹ ಕುಸಿತ ಕಂಡುಬಂದಿದೆ. ವಲಸೆ ಅಧ್ಯಯನ ಕೇಂದ್ರ (Center for Immigration Studies – CIS) ವಿಶ್ಲೇಷಣೆಯ ಪ್ರಕಾರ, 2025ರ ಮೇ-ಆಗಸ್ಟ್ ಅವಧಿಯಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ…

Read More

ಬಿ.ನಾಗೇಂದ್ರಗೆ ಎಸ್‌‍ಐಟಿಯಿಂದ ಕ್ಲೀನ್‌ಚಿಟ್‌ : ಸಚಿವ ಜಮೀರ್‌

ಚಿತ್ರದುರ್ಗ, ಆ.7- ಬಳ್ಳಾರಿ ಜಿಲ್ಲೆಯ ಸಚಿವ ಬಿ. ನಾಗೇಂದ್ರ ವಿರುದ್ಧ ಕೇಳಿಬಂದಿದ್ದ ಆರೋಪಗಳ ಕುರಿತು ವಿಶೇಷ ತನಿಖಾ ದಳ (ಎಸ್‌‍ಐಟಿ) ತನಿಖೆ ನಡೆಸಿ ಕ್ಲೀನ್‌ಚಿಟ್‌ ನೀಡಿದೆ. ಹೀಗಿದ್ದರೂ ಪ್ರಕರಣ ಎಲ್ಲಿ ಬಾಕಿ ಇದೆ ಎಂದು ಸಚಿವ ಜಮೀರ್‌ ಅಹದ್‌ ಖಾನ್‌ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎತ್ತರಕ್ಕೆ ಬೆಳೆದವರ ವಿರುದ್ಧ ರಾಜಕೀಯವಾಗಿ ಪಿತೂರಿ ನಡೆಸುವುದು ಸಹಜ. ಸಾಮಾನ್ಯ ಜನರ ಮೇಲೆ ಈ ರೀತಿಯ ಪಿತೂರಿಗಳು ನಡೆಯುವುದಿಲ್ಲ. ಬಿ. ನಾಗೇಂದ್ರ ಅವರು ರಾಜಕೀಯವಾಗಿ ಎತ್ತರಕ್ಕೆ ಬೆಳೆದಿರುವ ಕಾರಣ ಅವರ…

Read More

ಮಗನನ್ನು ಲೀಡರ್ ಮಾಡಲು ಸಿದ್ದರಾಮಯ್ಯ ಎಲ್ಲಾ ಕಾಂಗ್ರೆಸ್ ನಾಯಕರ ರಾಜಕೀಯ ಮುಗಿಸಿದ್ದಾರೆ : ಪ್ರತಾಪ್ ಸಿಂಹ ವಾಗ್ದಾಳಿ!

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಮಕ್ಕಳ ರಾಜಕೀಯ ಭವಿಷ್ಯಕ್ಕಾಗಿ ತಮ್ಮದೇ ಪಕ್ಷದ ಹಿರಿಯ ನಾಯಕರ ರಾಜಕೀಯ ಜೀವನವನ್ನು ಮುಗಿಸಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಗನನ್ನು ಸಚಿವರನ್ನಾಗಿ ಮಾಡಲು ಅಲ್ಲಿನ ನಾಯಕರನ್ನು ಮೂಲೆಗುಂಪು ಮಾಡಿದರೆ, ಮೈಸೂರು ಭಾಗದಲ್ಲಿ ಶಾಸಕ ಯತೀಂದ್ರ ಅವರನ್ನು ನಾಯಕನನ್ನಾಗಿ ಬೆಳೆಸಲು ಸಿದ್ದರಾಮಯ್ಯ ಅವರು ಡಾ. ಹೆಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ ಹಾಗೂ…

Read More

ಕರ್ನಾಟಕ ವಿಧಾನ ಪರಿಷತ್ ಸಭಾಪತಿ, ಉಪ ಸಭಾಪತಿ ಆಯ್ಕೆಗೆ ಮುಹೂರ್ತ ಫಿಕ್ಸ್: ಆ.14ರಂದು ಚುನಾವಣೆ ನಿಗದಿ

ಬೆಂಗಳೂರು: “ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜಿನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಪ್ರಸಕ್ತ ರಾಜಕೀಯ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ನೀಡಿದ್ದಾರೆ. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಹೊರಟ್ಟಿ ಅವರು ದೇಶದ ವಿಧಾನ ಪರಿಷತ್…

Read More

ಖಾತೆ ಹಂಚಿಕೆ ವಿಳಂಬ: ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ ಸಿಎಂ ಡಿ.ಕೆ.ಶಿವಕುಮಾರ್; ಬಿ.ಎಸ್.ಯಡೀಯೂರಪ್ಪ ಎಷ್ಟು ದಿನ ಒಬ್ಬರೇ ಸಿಎಂ ಆಗಿರಲಿಲ್ಲ? ಎಂದು ಟಾಂಗ್

ಬೆಂಗಳೂರು: ಖಾತೆ ಹಂಚಿಕೆ ವಿಳಂಬ ವಿಚಾರವಾಗಿ ವಿಅಪ್ಕ್ಷ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ನಡೆಸುತ್ತಿದ್ದ ವಾಗ್ದಾಳಿ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಖಾತೆ ಹಂಚಿಕೆ ಮಾಡಲು ಇನ್ನೂ ಸಮಯವಿದೆ. ಶೀಘ್ರದಲ್ಲಿ ಆಗಲಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಯಡಿಯೂರಪ್ಪ ಅವರು ಎಷ್ಟು ದಿನ ಒಬ್ಬರೇ ಸಿಎಂ ಆಗಿರಲಿಲ್ಲ? ಎಷ್ಟು ದಿನ ದೆಹಲಿಯಲ್ಲೇ ಉಳಿದುಕೊಂಡಿರಲಿಲ್ಲ? ಖಾತೆ ಹಂಚಿಕೆ ಶೀಘ್ರದಲ್ಲೇ ಆಗಲಿದೆ ಎಂದು ಹೇಳುವ ಮೂಲಕ ವಿಪಕ್ಷ ನಾಯಕರಿಗೆ ಟಾಂಗ್ ನೀಡಿದ್ದಾರೆ. ಸದನದಲ್ಲಿ ಹೊಸ ಸಚಿವರ…

Read More

‘ದಿ ಹಂಡ್ರೆಡ್’ ಲೀಗ್‌ನಲ್ಲಿ ವಿಲ್ ಜ್ಯಾಕ್ಸ್ ಅದ್ಭುತ ಕ್ಯಾಚ್: ಕ್ರಿಕೆಟ್ ಪ್ರೇಮಿಗಳನ್ನು ಬೆರಗುಗೊಳಿಸಿದ ಇಂಗ್ಲೆಂಡ್ ಆಲ್ರೌಂಡರ್!

ದಿಹಂಡ್ರೆಡ್ 2026 ಲೀಗ್‌ನಲ್ಲಿ ಇಂಗ್ಲೆಂಡ್‌ನ ತಾರಾ ಆಲ್ರೌಂಡರ್ ವಿಲ್ ಜ್ಯಾಕ್ಸ್ ಹಿಡಿದ ನಂಬಲಾಗದ ಕ್ಯಾಚ್ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ಲಾರ್ಡ್ಸ್ ಮೈದಾನದಲ್ಲಿ ಲಂಡನ್ ಸ್ಪಿರಿಟ್ ವಿರುದ್ಧ ನಡೆದ ಪಂದ್ಯದಲ್ಲಿ ಎಂಐ ಲಂಡನ್ ತಂಡ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿದ್ದು, ಈ ವೇಳೆ ವಿಲ್ ಜ್ಯಾಕ್ಸ್ ಬೌಂಡರಿ ಲೈನ್ ಬಳಿ ತೋರಿದ ಅದ್ಭುತ ಫೀಲ್ಡಿಂಗ್ ಪಂದ್ಯಕ್ಕೆ ಪ್ರಮುಖ ತಿರುವು ನೀಡಿತು. ಲಂಡನ್ ಸ್ಪಿರಿಟ್ ಇನ್ನಿಂಗ್ಸ್‌ನ 49 ನೇ ಎಸೆತದಲ್ಲಿ ಈ ರೋಚಕ ಘಟನೆ…

Read More

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯ: ಟೀಮ್ ಇಂಡಿಯಾದ ಸ್ಪಿನ್ ತಂತ್ರ ಮತ್ತು ಪ್ಲೇಯಿಂಗ್ ಇಲೆವೆನ್‌ನ ಅಸಲಿ ಲೆಕ್ಕಾಚಾರ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಏಕೈಕ ರೆಡ್-ಬಾಲ್ ಅಭ್ಯಾಸ ಪಂದ್ಯ ಇಂದು (ಆಗಸ್ಟ್ 7) ಕೊಲೊಂಬೋದ ನಾನ್‌ಡಿಸ್ಕ್ರಿಪ್ಟ್ಸ್ ಕ್ರಿಕೆಟ್ ಕ್ಲಬ್‌ನಲ್ಲಿ ಆರಂಭವಾಗಲಿದೆ. ನಾಲ್ಕು ದಿನಗಳ ಈ ವಾರ್ಮ್-ಅಪ್ ಪಂದ್ಯವು ಟೆಸ್ಟ್ ತಂಡದ ಆಯ್ಕೆಯ ಗೊಂದಲಗಳಿಗೆ ಉತ್ತರ ನೀಡುವ ನಿರೀಕ್ಷೆಯಿದೆ. ಹೊಸದಾಗಿ ತಂಡಕ್ಕೆ ಸೇರ್ಪಡೆಯಾಗಿರುವ ಸಾರಂಶ್ ಜೈನ್ ಮೇಲೆ ಎಲ್ಲರ ಕಣ್ಣು ನೆಟ್ಟಿದ್ದರೆ, ಜಸ್ಪ್ರೀತ್ ಬುಮ್ರಾ ಅಲಭ್ಯತೆಯಿಂದಾಗಿ ಆಕಿಬ್ ನಬಿ ತಂಡ ಸೇರಿಕೊಂಡಿದ್ದು, ವೇಗದ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ತಂದಿದೆ. ಇಂದು ಜೈನ್ ಅವರ…

Read More

ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರು ವಿಧಾನ ಪರಿಷತ್ (MLC) ಸದಸ್ಯೆಯಾಗಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಯಲ್ಲಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ನಾಲ್ಕುವರೆ ವರ್ಷಗಳ ಕಾನೂನು ಹೋರಾಟ: 2021ರ ಡಿಸೆಂಬರ್‌ನಲ್ಲಿ ನಡೆದಿದ್ದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ ಅವರು ಕೇವಲ 6 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಘೋಷಿಸಲಾಗಿತ್ತು. ಆದರೆ, ಸ್ಥಳೀಯ…

Read More

Karnataka Rains: ಕರಾವಳಿ ಜಿಲ್ಲೆಯಲ್ಲಿ ಹೆಚ್ಚು ಮಳೆ, ಯಾವ ಭಾಗದಲ್ಲಿ ಎಷ್ಟು?

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಉತ್ತಮ ಮಳೆಯಾಗಿದೆ. ಆದರೆ, ಕಳೆದ ಮೂರ್ನಾಲ್ಕು ದಿನದಿಂದ ಮಳೆ ಪ್ರಮಾಣದಲ್ಲಿ ಕಡಿಮೆಯಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ವಿಟ್ಲಪಡನೂರಿನಲ್ಲಿ 99.5 ಮಿ. ಮೀ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲ್ಲೂಕಿನ ದೇವಲಮಕ್ಕಿಯಲ್ಲಿ 98.5 ಮಿ.ಮೀ, ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ…

Read More
error: Content is protected !!