ನೈಸ್ ರಸ್ತೆ ಟೋಲ್ ಸ್ಥಗಿತಕ್ಕೆ ಎಚ್ಡಿಕೆ ಆಗ್ರಹ
ಬೆಂಗಳೂರು,ಆ.8- ರಾಜ್ಯ ಹೈಕೋರ್ಟ್ನ ದ್ವಿಸದಸ್ಯ ನ್ಯಾಯ ಪೀಠ ಜು.29 ರಂದು ಬಿಎಂಐಸಿ ಯೋಜನೆ ಕುರಿತಂತೆ ನೀಡಿರುವ ತೀರ್ಪಿನ ಬಗ್ಗೆ ರಾಜ್ಯಸರ್ಕಾರ ಏಕೆ ಮೌನ ವಹಿಸಿದೆ ಎಂದು ಪ್ರಶ್ನಿಸಿದ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ನೈಸ್ ರಸ್ತೆಯ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಲು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಂಐಸಿ ಕುರಿತಂತೆ ಹೈಕೋರ್ಟ್ನ ಆದೇಶವನ್ನು ಅನುಷ್ಠಾನಗೊಳಿಸಲು ಒತ್ತಾಯಿಸಿ ರಾಜ್ಯಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಒಂದು ವಾರ ಹತ್ತು ದಿನಗಳ ಗಡುವು ನೀಡಲಾಗುವುದು ಎಂದು ಹೇಳಿದರು. ಸರ್ಕಾರದ…
