Top News

ಕರ್ನಾಟಕ ವಿಧಾನ ಪರಿಷತ್ ಸಭಾಪತಿ, ಉಪ ಸಭಾಪತಿ ಆಯ್ಕೆಗೆ ಮುಹೂರ್ತ ಫಿಕ್ಸ್: ಆ.14ರಂದು ಚುನಾವಣೆ ನಿಗದಿ

ಬೆಂಗಳೂರು: “ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜಿನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಪ್ರಸಕ್ತ ರಾಜಕೀಯ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ನೀಡಿದ್ದಾರೆ. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಹೊರಟ್ಟಿ ಅವರು ದೇಶದ ವಿಧಾನ ಪರಿಷತ್…

Read More

ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ ರಿವರ್ಸ್ ತೆಗೆದುಕೊಳ್ಳವಾಗ ದುರಂತ, ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಧಾರವಾಡದ ಬಸ್ ನಿಲ್ದಾಣದಲ್ಲಿ ದುರಂತವೊಂದು ನಡೆದಿದೆ, ಬಸ್ ರಿವರ್ಸ್ ತೆಗೆದುಕೊಳ್ಳುತ್ತಿದ್ದ ವೇಳೆ ಕಂಪೌಂಡ್ ಗೋಡೆ ಹಾಗೂ ಬಸ್ ಮಧ್ಯೆ ಸಿಲುಕಿದ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಕಳೆದ ದಿನ ಸಂಜೆ ನಡೆದಿದೆ. ಧಾರವಾಡ ತಾಲೂಕಿನ ಚಂದನಮಟ್ಟಿ ಗ್ರಾಮದ ಫಾತೀಮಾ ಬಾಬಾಜಾನ್ ಜಾಗೀರದಾರ್ (17) ಎಂಬ ವಿದ್ಯಾರ್ಥಿನಿಯೇ ಈ ಘಟನೆಯಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿನಿಯಾಗಿದ್ದಾಳೆ. ಧಾರವಾಡದ ಮದೀನಾ ಕಾಲೇಜಿನಲ್ಲಿ ಪಿಯುಸಿ ಪ್ರಥಮ ವರ್ಷದಲ್ಲಿ ಓದುತ್ತಿದ್ದ ಫಾತೀಮಾ ಕಾಲೇಜು ಬಿಟ್ಟ ನಂತರ ಊರಿಗೆ ಹೋಗಲೆಂದು ಬಸ್ ನಿಲ್ದಾಣಕ್ಕೆ ಬಂದಿದ್ದಳು. ನಿಲ್ದಾಣದಲ್ಲಿ ಜನದಟ್ಟನೆ ಕೂಡ…

Read More

ಲಕ್ಷ್ಮೇಶ್ವರ : ಸಿ.ಸಿ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಡಾ.ಚಂದ್ರು ಲಮಾಣಿ |NKS TV4

ಸಿ.ಸಿ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಡಾ.ಚಂದ್ರು ಲಮಾಣಿ ಲಕ್ಷ್ಮೇಶ್ವರ “ತಾಲೂಕಿನ ಕುಂದ್ರಳ್ಳಿ ಗ್ರಾಮದಿಂದ ಬಟ್ಟೂರು ಲಕ್ಷ್ಮೇಶ್ವರ ಸಂಪರ್ಕಿಸುವ ಮೇನ್ ರಸ್ತೆ ಸಿ.ಸಿ ರಸ್ತೆ ನಿರ್ಮಾಣಕ್ಕೆ ಸುಮಾರು 50 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಶಾಸಕ ಡಾ ಚಂದ್ರು ಲಮಾಣಿ ಅವರು ಹಾಗೂ ಬಟ್ಟೂರು ಗ್ರಾಮ ಪಂಚಾಯತಿಯ ಅಧ್ಯಕ್ಷನಿಯಾದ ನೀಲವ್ವ ಮಂಜಪ್ಪ ಕಳಸದ ಅವರು ಕುಂದ್ರಳ್ಳಿ ಗ್ರಾಮದಲ್ಲಿ ಗ್ರಾಮಸ್ಥರೊಂದಿಗೆ ಭೂಮಿ ಪೂಜೆ ನೆರವೇರಿಸಿದರು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಡಾ ಚಂದ್ರು ಲಮಾಣಿ…

Read More

ಕಲಬುರಗಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ.. ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಟೌನ್‌ಶಿಪ್ ಮಾಡಲು ಕೆಐಎಡಿಬಿಯಿಂದ ಸಾವಿರಾರು ಎಕರೆ ಭೂಮಿ ವಶಪಡಿಸಿಕೊಂಡಿದ್ದೀರಿ ಅಲ್ವಾ? ಹಾಗಾದರೆ ರೈತರ ಫಲವತ್ತಾದ ಜಮೀನು ಯಾಕೆ ಬೇಕು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೆಐಎಡಿಬಿಯಲ್ಲಿ ಈಗಾಗಲೇ ಸುಮಾರು ಒಂದೂವರೆ ಲಕ್ಷ ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಹಾಗಿದ್ದರೂ ಫಲವತ್ತಾದ ಭೂಮಿಯ ಮೇಲೆಯೇ ಯಾಕೆ…

Read More

ಗದಗ: ತಾಂತ್ರಿಕ ತೊಂದರೆಯಿಂದ ವಿಂಡ್ ಫ್ಯಾನ್ ಧಗ ಧಗನೆ ಹೊತ್ತಿ ಉರಿದ ಘಟನೆ ಗದಗ ತಾಲೂಕಿನ ಹೊಸೂರು ಗ್ರಾಮದ ಬಳಿ ನಡೆದಿದೆ.

ಗಾಮೇಸ್ ಕಂಪನಿಗೆ ಸೇರಿದ ವಿಂಡ್ ಫ್ಯಾನ್ ಇದಾಗಿದ್ದು, ಕಳೆದ 10 ವರ್ಷಗಳ ಹಿಂದೆ ಅಳವಡಿಸಿದ್ದ ವಿಂಡ್ ಫ್ಯಾನ್ ಎನ್ನಲಾಗಿದೆ. ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ. ವೇಗವಾಗಿ ಗಾಳಿ ಬಿಸುತ್ತಿರುವುದರಿಂದ ಫ್ಯಾನ್ ನಿಯಂತ್ರಣಕ್ಕೆ ಸಿಗಲಿಲ್ಲ. ಪವರ್ ಸಪ್ಲಾಯ್ ಬಂದ್ ಮಾಡಿದ್ರೂ ಫ್ಯಾನ್ ತಿರುಗುತ್ತಿತ್ತು. ಮೋಟರ್ ಬಿಸಿಯಾಗಿ ನಂತರ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ಟೆಕ್ನಿಶಿಯನ್ ಸ್ಪಷ್ಟನೆ ನೀಡಿದ್ದಾರೆ. ಫ್ಯಾನ್ ನಲ್ಲಿ ಬೆಂಕಿ ಕಂಡು ಸ್ಥಳಿಯ ರೈತರಲ್ಲಿ ಆತಂಕ ಮೂಡಿದೆ. ಜಮೀನಿನಲ್ಲಿ ಕೆಲಸ…

Read More

ಮಣ್ಣೆತ್ತಿನ ಅಮಾವಾಸ್ಯೆಯ ಸಂಭ್ರಮ! ಎತ್ತಿನ ವ್ಯಾಪಾರ ಬಲು ಜೋರು

ಹೌದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಮಣ್ಣೆತ್ತಿನ ಅಮಾವಾಸ್ಯೆ ಆಚರಣೆಯ ಸಂಭ್ರಮ ಅದರಂತೆ ಲಕ್ಷ್ಮೇಶ್ವರ ಸಮೀಪದ ಶಿಗ್ಲಿ ಗ್ರಾಮದ ಧಾರ್ಮಿಕ ಮುಖಂಡರಾದ ವೀರಣ್ಣ ಪವಾಡದ ಅವರ ಮನೆಯಲ್ಲಿ ಮಣ್ಣೆತ್ತಿನ ಅಮವಾಸೆಯನ್ನು ಸಂಭ್ರಮದಿಂದ ಆಚರಿಸಲಾಯಿತು ಮಣ್ಣೆತ್ತಿನ ಅಮಾವಾಸ್ಯೆ ಆಚರಣೆ ಕುರಿತು ಮಾತನಾಡಿದ ವೀರಣ್ಣ ಪವಾಡದ ಆವರು “ಮಣ್ಣು” ಮತ್ತು “ಎತ್ತು” ಎಂಬ ಎರಡು ಪದಗಳ ಸಂಯೋಜನೆಯಿಂದ “ಮಣ್ಣೆತ್ತು” ಎಂಬ ಪದ ರೂಪುಗೊಂಡಿದೆ. ಕೃಷಿಯ ಮೂಲಾಧಾರವಾದ ಭೂಮಿ ಮತ್ತು ಕೃಷಿ ಕಾರ್ಯದ ಪ್ರಮುಖ ಸಹಚರರಾದ…

Read More

ಸರಳತೆಯೇ ಶ್ರೀಮಂತಿಕೆ: ಹೊಲದಲ್ಲೂ ಮುಂಚೂಣಿ, ಕುಟುಂಬದಲ್ಲೂ ಆದರ್ಶ – ಲಕ್ಷ್ಮೀದೇವಿ ದೊಡ್ಡನಗೌಡ ಪಾಟೀಲ ಬದುಕು ಯುವಜನತೆಗೆ ಪ್ರೇರಣೆ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕೋರಡಕೆರಾ ಗ್ರಾಮದ ಲಕ್ಷ್ಮಿ ದೇವಿ ಅಧಿಕಾರ, ಐಶಾರಾಮಿ ಬದುಕು ಮತ್ತು ಆಡಂಬರದ ನಡುವೆ ಸರಳತೆಯ ಮೌಲ್ಯಗಳು ಮಸುಕಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ, ಜನಪ್ರತಿನಿಧಿಯೊಬ್ಬರ ಧರ್ಮಪತ್ನಿ ತಮ್ಮ ಸರಳ ಜೀವನಶೈಲಿ, ಕೃಷಿಯ ಮೇಲಿನ ಅಪಾರ ಪ್ರೀತಿ ಹಾಗೂ ಕುಟುಂಬದ ಜವಾಬ್ದಾರಿಗಳ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ದೊಡ್ಡನಗೌಡ ಹೆಚ್. ಪಾಟೀಲ ಅವರ ಧರ್ಮಪತ್ನಿ ಶ್ರೀಮತಿ ಲಕ್ಷ್ಮೀದೇವಿ ದೊಡ್ಡನಗೌಡ ಪಾಟೀಲ ಅವರು ಅಧಿಕಾರದ…

Read More

ಚನ್ನಗಿರಿ: ಜೋಳದಾಳ್ ಸರ್ಕಾರಿ ಪ್ರೌಢಶಾಲೆಯಲ್ಲಿ ಆಡಳಿತಾತ್ಮಕ ವಿವಾದ ತೀವ್ರ

ಜೋಳದಾಳ್ ಸರ್ಕಾರಿ ಪ್ರೌಢಶಾಲೆಯಲ್ಲಿ ಆಡಳಿತಾತ್ಮಕ ವಿವಾದ ತೀವ್ರ: ಮುಖ್ಯೋಪಾಧ್ಯಾಯರ ವಿರುದ್ಧ ಎಸ್‌ಡಿಎಂಸಿ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಂದ ಗಂಭೀರ ಆರೋಪ – ಸಮಗ್ರ ತನಿಖೆಗೆ ಆಗ್ರಹ ಚನ್ನಗಿರಿ: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರ ಆಡಳಿತ ವೈಖರಿ, ಶಾಲೆಯ ಸ್ವಚ್ಛತೆ, ಶೈಕ್ಷಣಿಕ ವಾತಾವರಣ ಹಾಗೂ ಸಾರ್ವಜನಿಕರೊಂದಿಗೆ ಹೊಂದಾಣಿಕೆ ಕುರಿತು ಎಸ್‌ಡಿಎಂಸಿ ಸದಸ್ಯರು, ಪೋಷಕರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಗಂಭೀರ ಆರೋಪಗಳನ್ನು ಮುಂದಿಟ್ಟಿದ್ದು, ಶಾಲೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಇಂದು ಶಾಲಾ ಆವರಣದಲ್ಲಿ ನಡೆದ ಬೆಳವಣಿಗೆಗಳ…

Read More
error: Content is protected !!