ಬೆಂಗಳೂರು ನಮ್ಮ ಮೆಟ್ರೋ ಹೊಸೂರಿಗೆ ವಿಸ್ತರಣೆ ? ಕೇಂದ್ರದೊಂದಿಗೆ ಚರ್ಚೆ ಆರಂಭಿಸಿದ ತಮಿಳುನಾಡು ಸರ್ಕಾರ
Bengaluru Metro: ಬ್ರ್ಯಾಂಡ್ ಬೆಂಗಳೂರು ಹಾಗೂ ಬೆಂಗಳೂರಿನಿಂದ ಆಗುವ ಲಾಭ – ಲೆಕ್ಕಾಚಾರದ ಮೇಲೆ ತಮಿಳುನಾಡು ಮತ್ತೊಮ್ಮೆ ಕಣ್ಣಿಟ್ಟಿದೆ. ಬೆಂಗಳೂರಿಗೆ ಪೈಪೋಟಿ ನೀಡುವ ಹಲವು ಯೋಜನೆಗಳನ್ನು ಈಗಾಗಲೇ ತಮಿಳುನಾಡು ಈ ಹಿಂದಿನ ಸರ್ಕಾರ ದ್ರಾವಿಣ ಮುನ್ನೇತ್ರ ಕಳಗಂ ಪಕ್ಷವು ಪ್ರಾರಂಭಿಸಿತ್ತು.ಇದೀಗ ತಮಿಳುನಾಡಿನಲ್ಲಿ ಆಡಳಿತ ನಡೆಸುತ್ತಿರುವ ತಮಿಳಗ ವೆಟ್ರಿ ಕಳಗಂ ಪಕ್ಷವು ಬೆಂಗಳೂರಿನ ನಮ್ಮ ಮೆಟ್ರೋ ಜಾಲದ ಮೇಲೆ ಕಣ್ಣಿಟ್ಟಿದೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರ್ಯಾಯವಾಗಿ ಹೊಸೂರಿನಲ್ಲಿ ಹೊಸ ಹಾಗೂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು…
ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರಿಗೆ ಗಜೇಂದ್ರಗಡದಲ್ಲಿ ಭವ್ಯ ಸ್ವಾಗತಕ್ಕೆ ಸಕಲ ಸಿದ್ಧತೆ
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಬಾಗಮಾರ ಸೇವಾ ಸಮಿತಿ (ರಿ) ಹಾಗೂ ಭಗವಾನ್ ಮಹಾವೀರ ಜೈನ ಆಯುರ್ವೇದ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಪಿ.ಜಿ. ಸೆಂಟರ್ ವತಿಯಿಂದ ಆಯೋಜಿಸಿರುವ ಘಟಿಕೋತ್ಸವ ಕಾರ್ಯಕ್ರಮಕ್ಕೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಮಾನ್ಯ ಶ್ರೀ ಥಾವರಚಂದಜಿ ಗೆಹ್ಲೋಟ್ ಅವರು ಉದ್ಘಾಟಕರು ಹಾಗೂ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಗುರುವಾರ, ಜುಲೈ 23, 2026 ರಂದು ಬೆಳಿಗ್ಗೆ 11.00 ಗಂಟೆಗೆ ಗಜೇಂದ್ರಗಡದ ಟಿಟಿಡಿ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗವಹಿಸಿ ಘಟಿಕೋತ್ಸವವನ್ನು ಉದ್ಘಾಟಿಸಲಿದ್ದಾರೆ….
ಇಂದು ‘ಟಾಕ್ಸಿಕ್’ ಟ್ರೈಲರ್ ಧಮಾಕಾ: ರಾಯ್ ಲುಕ್ ಸ್ಫೋಟಕ್ಕೆ 7:01 PM ಟೈಮ್ ಫಿಕ್ಸ್
ಸ್ಯಾಂಡಲ್ವುಡ್ನಿಂದ ಹಾಲಿವುಡ್ವರೆಗೂ ನಿರೀಕ್ಷೆ ಮೂಡಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಲಿದೆ. ಟ್ರೈಲರ್ ಬಿಡುಗಡೆ ಸಮಯವನ್ನು ಚಿತ್ರತಂಡ ಇದೀಗ ಅಧಿಕೃತವಾಗಿ ಘೋಷಿಸಿದೆ. ಚಿತ್ರತಂಡ ಹಂಚಿಕೊಂಡಿರುವ ಹೊಸ ಪೋಸ್ಟರ್ನಲ್ಲಿ ಭಾರೀ ಸ್ಫೋಟ ಮತ್ತು ಬೆಂಕಿಯ ನಡುವೆ ಯಶ್ ಮಾಸ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಪೋಸ್ಟರ್ನಲ್ಲಿ ‘TRAILER 7:01 PM’ ಎಂದು ಉಲ್ಲೇಖಿಸಲಾಗಿದ್ದು, ಇಂದು ಸಂಜೆ 7:01ಕ್ಕೆ ಟ್ರೈಲರ್ ಬಿಡುಗಡೆಯಾಗಲಿದೆ.ಗೀತು ಮೋಹನ್ದಾಸ್ ನಿರ್ದೇಶನದ ‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ರಾಯ್…
ಲಕ್ಷ್ಮೇಶ್ವರ : ಸಿ.ಸಿ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಡಾ.ಚಂದ್ರು ಲಮಾಣಿ |NKS TV4
ಸಿ.ಸಿ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಡಾ.ಚಂದ್ರು ಲಮಾಣಿ ಲಕ್ಷ್ಮೇಶ್ವರ “ತಾಲೂಕಿನ ಕುಂದ್ರಳ್ಳಿ ಗ್ರಾಮದಿಂದ ಬಟ್ಟೂರು ಲಕ್ಷ್ಮೇಶ್ವರ ಸಂಪರ್ಕಿಸುವ ಮೇನ್ ರಸ್ತೆ ಸಿ.ಸಿ ರಸ್ತೆ ನಿರ್ಮಾಣಕ್ಕೆ ಸುಮಾರು 50 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಶಾಸಕ ಡಾ ಚಂದ್ರು ಲಮಾಣಿ ಅವರು ಹಾಗೂ ಬಟ್ಟೂರು ಗ್ರಾಮ ಪಂಚಾಯತಿಯ ಅಧ್ಯಕ್ಷನಿಯಾದ ನೀಲವ್ವ ಮಂಜಪ್ಪ ಕಳಸದ ಅವರು ಕುಂದ್ರಳ್ಳಿ ಗ್ರಾಮದಲ್ಲಿ ಗ್ರಾಮಸ್ಥರೊಂದಿಗೆ ಭೂಮಿ ಪೂಜೆ ನೆರವೇರಿಸಿದರು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಡಾ ಚಂದ್ರು ಲಮಾಣಿ…
ಪ್ರಜ್ವಲ್ ರೇವಣ್ಣ ಸೆಲ್ ಮೇಲೆ ಸಿಸಿಬಿ ದಾಳಿ: ಮೊಬೈಲ್ ಹಾಗೂ ಪೆನ್ಡ್ರೈವ್ನಲ್ಲಿ ಪತ್ತೆಯಾದ ಅಶ್ಲೀಲ ವಿಡಿಯೋಗಳುಪ್ರಜ್ವಲ್ ರೇವಣ್ಣ ಸೆಲ್ ಮೇಲೆ ಸಿಸಿಬಿ ದಾಳಿ: ಮೊಬೈಲ್ ಹಾಗೂ ಪೆನ್ಡ್ರೈವ್ನಲ್ಲಿ ಪತ್ತೆಯಾದ ಅಶ್ಲೀಲ ವಿಡಿಯೋಗಳು
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿಯ ವೇಳೆ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಸೆಲ್ನಲ್ಲಿ ಮೊಬೈಲ್ ಮತ್ತು ಪೆನ್ ಡ್ರೈವ್ ಪತ್ತೆಯಾಗಿರುವುದು ದೊಡ್ಡ ಸಂಚಲನ ಮೂಡಿಸಿದೆ. ಜೈಲಿನ ವಿಐಪಿ ಸೆಲ್ನಲ್ಲಿ ಸಿಕ್ಕ ಈ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರಿಶೀಲಿಸಿದಾಗ, ಅವುಗಳಲ್ಲಿ ಯುವತಿಯರ ಅಶ್ಲೀಲ ವಿಡಿಯೋಗಳು ಹಾಗೂ ಫೋಟೋಗಳ ಕಟ್ಟಿಂಗ್ಗಳು ಇರುವುದು ಕಂಡುಬಂದು ಪೊಲೀಸ್ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಪ್ರಜ್ವಲ್ ಬಳಿ ನೀಲಿ ಬಣ್ಣದ ರೆಡ್ಮಿ…
ಮುರಿದ ಕಾಲಿಗೆ ರಟ್ಟು ಕಟ್ಟಿದ ಬಿಹಾರದ ಸರ್ಕಾರಿ ಆಸ್ಪತ್ರೆ; ‘ವಾಹ್ ಎಂಥಾ ಪ್ರಯೋಗ’ ಎಂದು ನೆಟ್ಟಿಗರು ಲೇವಡಿ..Bihar
ಮುರಿದ ಕಾಲಿಗೆ ರಟ್ಟು ಕಟ್ಟಿದ ಬಿಹಾರದ ಸರ್ಕಾರಿ ಆಸ್ಪತ್ರೆ; ‘ವಾಹ್ ಎಂಥಾ ಪ್ರಯೋಗ’ ಎಂದು ನೆಟ್ಟಿಗರು ಲೇವಡಿ..Bihar ಸದ್ಯ ಈ ಘಟನೆಯು ಇಲ್ಲಿನ ಆರೋಗ್ಯ ವ್ಯವಸ್ಥೆ ಬಗ್ಗೆ ಗಂಭೀರ ಚರ್ಚೆಯನ್ನು ಹುಟ್ಟುಹಾಕಿದೆ.ಮಂಝೌಲ್ ಉಪ ವಿಭಾಗೀಯ ಆಸ್ಪತ್ರೆಯಿಂದ ಗಾಯಗೊಂಡ ರೋಗಿಯ ಕಾಲಿಗೆ ಬೇರೆಡೆಗೆ ಕಳುಹಿಸುವ ಮೊದಲು ಕಾರ್ಡ್ಬೋರ್ಡ್ ತುಂಡುಗಳ ಮೂಲಕ ಬೆಂಬಲ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಟ್ಟು ಕಟ್ಟಿದ ಸಿಬ್ಬಂದಿಆಗಸ್ಟ್ 3ರ ಸಂಜೆ ಈ ಘಟನೆ ನಡೆದಿದ್ದು, ಹರ್ಸೇನ್ ಸೇತುವೆ ಬಳಿ ನಡೆದ ಅಪಘಾತದಿಂದಾಗಿ…
ಚನ್ನಗಿರಿ: ಜೋಳದಾಳ್ ಸರ್ಕಾರಿ ಪ್ರೌಢಶಾಲೆಯಲ್ಲಿ ಆಡಳಿತಾತ್ಮಕ ವಿವಾದ ತೀವ್ರ
ಜೋಳದಾಳ್ ಸರ್ಕಾರಿ ಪ್ರೌಢಶಾಲೆಯಲ್ಲಿ ಆಡಳಿತಾತ್ಮಕ ವಿವಾದ ತೀವ್ರ: ಮುಖ್ಯೋಪಾಧ್ಯಾಯರ ವಿರುದ್ಧ ಎಸ್ಡಿಎಂಸಿ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಂದ ಗಂಭೀರ ಆರೋಪ – ಸಮಗ್ರ ತನಿಖೆಗೆ ಆಗ್ರಹ ಚನ್ನಗಿರಿ: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರ ಆಡಳಿತ ವೈಖರಿ, ಶಾಲೆಯ ಸ್ವಚ್ಛತೆ, ಶೈಕ್ಷಣಿಕ ವಾತಾವರಣ ಹಾಗೂ ಸಾರ್ವಜನಿಕರೊಂದಿಗೆ ಹೊಂದಾಣಿಕೆ ಕುರಿತು ಎಸ್ಡಿಎಂಸಿ ಸದಸ್ಯರು, ಪೋಷಕರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಗಂಭೀರ ಆರೋಪಗಳನ್ನು ಮುಂದಿಟ್ಟಿದ್ದು, ಶಾಲೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಇಂದು ಶಾಲಾ ಆವರಣದಲ್ಲಿ ನಡೆದ ಬೆಳವಣಿಗೆಗಳ…
ಬಿ.ನಾಗೇಂದ್ರಗೆ ಎಸ್ಐಟಿಯಿಂದ ಕ್ಲೀನ್ಚಿಟ್ : ಸಚಿವ ಜಮೀರ್
ಚಿತ್ರದುರ್ಗ, ಆ.7- ಬಳ್ಳಾರಿ ಜಿಲ್ಲೆಯ ಸಚಿವ ಬಿ. ನಾಗೇಂದ್ರ ವಿರುದ್ಧ ಕೇಳಿಬಂದಿದ್ದ ಆರೋಪಗಳ ಕುರಿತು ವಿಶೇಷ ತನಿಖಾ ದಳ (ಎಸ್ಐಟಿ) ತನಿಖೆ ನಡೆಸಿ ಕ್ಲೀನ್ಚಿಟ್ ನೀಡಿದೆ. ಹೀಗಿದ್ದರೂ ಪ್ರಕರಣ ಎಲ್ಲಿ ಬಾಕಿ ಇದೆ ಎಂದು ಸಚಿವ ಜಮೀರ್ ಅಹದ್ ಖಾನ್ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎತ್ತರಕ್ಕೆ ಬೆಳೆದವರ ವಿರುದ್ಧ ರಾಜಕೀಯವಾಗಿ ಪಿತೂರಿ ನಡೆಸುವುದು ಸಹಜ. ಸಾಮಾನ್ಯ ಜನರ ಮೇಲೆ ಈ ರೀತಿಯ ಪಿತೂರಿಗಳು ನಡೆಯುವುದಿಲ್ಲ. ಬಿ. ನಾಗೇಂದ್ರ ಅವರು ರಾಜಕೀಯವಾಗಿ ಎತ್ತರಕ್ಕೆ ಬೆಳೆದಿರುವ ಕಾರಣ ಅವರ…
ಕರ್ನಾಟಕ ವಿಧಾನ ಪರಿಷತ್ ಸಭಾಪತಿ, ಉಪ ಸಭಾಪತಿ ಆಯ್ಕೆಗೆ ಮುಹೂರ್ತ ಫಿಕ್ಸ್: ಆ.14ರಂದು ಚುನಾವಣೆ ನಿಗದಿ
ಬೆಂಗಳೂರು: “ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜಿನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಪ್ರಸಕ್ತ ರಾಜಕೀಯ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ನೀಡಿದ್ದಾರೆ. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಹೊರಟ್ಟಿ ಅವರು ದೇಶದ ವಿಧಾನ ಪರಿಷತ್…
